Politics
Trending

ಫೈರ್ ಬ್ರ್ಯಾಂಡ್ ಶಾಸಕ ಯತ್ನಾಳರ ಹತ್ಯೆಗೆ ಸಂಚು: ಸಂಚಲನ ಸೃಷ್ಟಿಸಿದ ಯುವಕನ ಆಡಿಯೋ

ಫೈರ್ ಬ್ರ್ಯಾಂಡ್ ಶಾಸಕ ಯತ್ನಾಳರ ಹತ್ಯೆಗೆ ಸಂಚು: ಸಂಚಲನ ಸೃಷ್ಟಿಸಿದ ಯುವಕನ ಆಡಿಯೋ
ವಿಜಯಪುರ ನಗರ ಶಾಸಕ ಹಾಗೂ ಹಿಂದುತ್ವದ ಫೈರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಅವಹೇಳನ ಕಾರಿ ಹೇಳಿಕೆ ನೀಡಿದ ಹಿನ್ನೆಲೆ, ಶಾಸಕನ ಹತ್ಯೆಗೆ ಸಂಚು ನಡೆದಿತ್ತು ಎನ್ನುವ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಯುವಕನ ಆಡಿಯೋದಲ್ಲಿ ನಡೆದ ಸಂಭಾಷಣೆ ಪುಷ್ಟಿ ನೀಡಿದೆ.
ಇದೇ ತಿಂಗಳು ದಿನಾಂಕ 7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತನಾಡುತ್ತಾ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಯತ್ನಾಳ್‌ ವಿರುದ್ಧ ಪ್ರತಿಭಟನೆ ನಡೆಸಲು ಒಟ್ಟಾಗಿ ಎಂದು ಕರೆ ನೀಡಿರುವ ಮುಸ್ಲಿಂ ಯುವಕನ ಸ್ಫೋಟಕ ಆಡಿಯೋ ವೈರಲ್‌ ಆಗಿದೆ. ಇದು ವಿಜಯಪುರದಲ್ಲಿ ಭಾರೀ ಆತಂಕ ಸೃಷ್ಟಿಸಿದೆ.
ಇನ್ನೂ ಆಡಿಯೋದಲ್ಲಿ ಗೆಳೆಯರೇ.. ನಮಸ್ಕಾರ ಎಲ್ಲ ಸಹೋದರ, ಸಹೋದರಿಯರಿಗೆ ನಮಸ್ಕಾರ. ವಿಜಯಪುರದಲ್ಲಿಂದ ದೊಡ್ಡ ಮೀಟಿಂಗ್‌ ಕರೆಯಲಾಗಿತ್ತು. ನಗರದ ಆಲಂಗೀರ್ ಹಾಲ್‌ನಲ್ಲಿ ಎಂಎಂಸಿ ಮೀಟಿಂಗ್‌ನಲ್ಲಿ ವಿಜಯಪುರದ ಎಲ್ಲ ದಿಗ್ಗಜ ಸದಸ್ಯರು, ಉಲ್ಮಾಗಳು ಅಲ್ಲಿ ಇದ್ರೂ. ಅಲ್ಲಿ ಇದೇ ತಿಂಗಳ ಏ.15 ರಂದು ವಿಜಯಪುರ ಬಂದ್ ಮಾಡಲು ನಿರ್ಧಾರ ಆಗಿದೆ. ಇನ್ನು ಯತ್ನಾಳ್‌ಗೆ ಅದು ಫೈನಲ್ ದಿನ. ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾನೆ ಯತ್ನಾಳ್. ಇದನ್ನ ವಿರೋಧಿಸಿ 1 ಲಕ್ಷ ಜನರು ರ್ಯಾಲಿಯಲ್ಲಿ ಸೇರುತ್ತಿದ್ದಾರೆ.
ಈ ಬಾರಿ ಎಲ್ಲರು ನಿರ್ಧರಿಸಿದ್ದಾರೆ ಅವನದ್ದು ಕೊನೆಯ ದಿನ ಅಂತಾ. ಅವನು ಅರೆಸ್ಟ್ ಆಗಬೇಕು ಇಲ್ಲ, ರ್ಯಾಲಿ ಅವನ ಮನೆಗೆ ತೆರಳಬೇಕು, ರ್ಯಾಲಿ ಅಲ್ಲಿಂದ ಅವನ ಮನೆಗೆ ನೇರವಾಗಿ ಹೋಗುತ್ತೆ. ಆದ್ದರಿಂದ ಎಲ್ಲ ಸಹೋದರ, ಸಹೋದರಿಯರು ಹೆಚ್ಚಿನ ಸಂಖ್ಯೆಯಲ್ಲಿ ರ್ಯಾಲಿಯಲ್ಲಿ ಪಾಲ್ಗೊಳ್ಳಬೇಕು. ಏ.15ರಂದು ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿ ಸೇರಬೇಕು, ನಿಮ್ಮ ಅಕ್ಕ-ಪಕ್ಕದ ಊರುಗಳಲ್ಲಿರುವ ಎಲ್ಲ ಸ್ನೇಹಿತರು, ಅಣ್ಣ-ತಮ್ಮಂದಿರಿಗೆ ವಿಷಯ ಹೇಳಿ. ಈ ಬಾರಿ ಅವನದ್ದು ಫೈನಲ್ ದಿನ ಇದೆ. ಇಲ್ಲಿವರೆಗೂ ಅವನ ವಿರುದ್ಧ ದೂರು ಕೊಡುತ್ತಿದ್ದೆವು. ಆದ್ರೆ ಏನಾಗುತ್ತಿತ್ತು ಅವನು ಬೇಲ್ ಮೇಲೆ ಹೊರಗಡೆ ಬರ್ತಾ ಇದ್ದ.
ಈ ಬಾರಿ ಆ ರೀತಿ ಆಗಲ್ಲ. ಈ ಬಾರಿ ಅವನು ಅರೆಸ್ಟ್ ಆಗಬೇಕು, ಇಲ್ಲ ಅವನ ರುಂಡ ದೇಹದಿಂದ ಇಬ್ಭಾಗ ಆಗಬೇಕು. ಮುಸ್ಲಿಂ ಸದಸ್ಯರು ಎಲ್ಲರೂ ಸಿದ್ಧರಾಗಿ ಕುಳಿತಿದ್ದಾರೆ. ಏ.15ರಂದು ಯಾವುದೇ ಕೆಲಸ ಇದ್ದರೂ ರಜೆ ಮಾಡಿ, ಅಂಬೇಡ್ಕರ್ ವೃತ್ತದಲ್ಲಿ ಜಮಾವಣೆ ಆಗಿ. ಇನ್ ಷಾ ಅಲ್ಲಾ.. ಎಲ್ಲರು ಅಲ್ಲೇ ಸಿಗೋಣ ಎಂದು ಆಡಿಯೋನಲ್ಲಿ ಹೇಳಿದ್ದಾನೆ
ಸದ್ಯ ಶಾಸಕನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎನ್ನುವುದಕ್ಕೆ ಪುಷ್ಟಿ ನೀಡುವಂತಿರುವ ಈ ಆಡಿಯೋ ತೀವ್ರ ಸದ್ದು ಮಾಡುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಈ ಆಡಿಯೋ ಸಂಚಲನ ಸೃಷ್ಟಿಸಿದೆ.
Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button