State
Trending

Ration Card: ರಾಜ್ಯದ ಬಿಪಿಎಲ್‌, ಎಪಿಎಲ್‌ ಪಡಿತರ ಚೀಟಿದಾರರಿಗೆ ಮತ್ತೊಮ್ಮೆ ಗುಡ್‌ ನ್ಯೂಸ್‌; ಕೊನೆಯ ದಿನಾಂಕ ಯಾವಾಗ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ತಿದ್ದುಪಡಿಗೆ ಎಲ್ಲೆಲ್ಲಿ ಅರ್ಜಿ ಸಲ್ಲಿಕೆ ಮಾಡಬಹದು?

Ration Card: ರಾಜ್ಯದಲ್ಲಿ ಆಹಾರ ಇಲಾಖೆಯು ಪಡಿತರ ಚೀಟಿ ತಿದ್ದುಪಡಿ ಪ್ರಕ್ರಿಯೆ ದಿನಾಂಕವನ್ನು ಹಲವು ಬಾರಿ ಮುಂದೂಡಿಕೆ ಮಾಡುತ್ತಲೇ ಬಂದಿದೆ. ಈ ಹಿಂದೆ ಮಾರ್ಚ್‌ 31ರ ವರೆಗೂ ಗುಡುಗು ವಿಸ್ತರಣೆ ಮಾಡಲಾಗಿದ್ದು, ಮತ್ತೊಮ್ಮೆ ಮುಂದೂಡಿಕೆ ಮಾಡಲಾಗಿದೆ. ಹಾಗಾದ್ರೆ ಏನೆಲ್ಲಾ ತಿದ್ದುಪಡಿ ಮಾಡಿಸಿಕೊಳ್ಳಬಹುದು ಹಾಗೂ ಕೊನೆಯ ದಿನಾಂಕ ಯಾವಾಗ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಯಾವುದೇ ಸರ್ಕಾರಿ ಯೋಜನೆಗಳಿಗೆ ಸರ್ಜಿ ಸಲ್ಲಿಕೆ ಮಾಡಬೇಕೆಂದರೆ ಪಡಿತರ ಚೀಟಿ ಬೇಕೇ ಬೇಕಾಗುತ್ತದೆ. ಅದರಲ್ಲೂ ಒಂದು ತಪ್ಪಿದ್ದರೂ ಸಹ ಅರ್ಜಿ ಸ್ವೀಕೃತವಾಗುವುದಿಲ್ಲ. ಆದ್ದರಿಂದ ಇದೀಗ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, ತಿದ್ದುಪಡಿ ಮಾಡಿಸಲು ಇದೇ ಉತ್ತಮ ಅವಕಾಶ ಆಗಿದೆ.

ರಾಜ್ಯದಲ್ಲಿ ಇದೀಗ ಪಡಿತರ ಚೀಟಿ ತಿದ್ದುಪಡಿ ಸೇವೆ ಚಾಲ್ತಿಯಲ್ಲಿದೆ. ಆದರೆ ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಮಾಡಲು ಇನ್ನೂ ಅವಕಶ ಕಲ್ಪಿಸಲಾಗಿಲ್ಲ. ಬದಲಾಗಿ ಈಗಾಗಲೇ ಪಡಿತರ ಚೀಟಿ ಹೊಂದಿರುವವರು ಸದಸ್ಯರ ಸೇರ್ಪಡೆಗೆ ಸೇರಿದಂತೆ ಪೋಟೋ ಬದಲಾವಣೆ, ಇತರೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್, ಸೈಬರ್ ಸೆಂಟರ್‌ಗಳಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ. 2025ರ ಜೂನ್‌ 30ರ ವರೆಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ತಿದ್ದುಪಡಿಗೆ ಎಲ್ಲೆಲ್ಲಿ ಅರ್ಜಿ ಸಲ್ಲಿಕೆ ಮಾಡಬಹದು?

* ಕರ್ನಾಟಕ ಒನ್‌

* ಗ್ರಾಮ ಒನ್‌

* ಬೆಂಗಳೂರು ಒನ್

ಏನೆಲ್ಲಾ ತಿದ್ದುಪಡಿ ಮಾಡಿಸಬಹುದು?

* ಸದಸ್ಯರ ಸೇರ್ಪಡೆ

* ಪೋಟೋ ಬದಲಾವಣೆ

* ಹೆಸರು ತೆಗೆದುಹಾಕುವಿಕೆ

* ನ್ಯಾಯಬೆಲೆ ಅಂಗಡಿ ನಂಬರ್ ಬದಲಾವಣೆ

* ಹೆಸರು ತಿದ್ದುಪಡಿ

* ಕುಟುಂಬದ ಮುಖ್ಯಸ್ಥರ ಬದಲಾವಣೆ

* ಸದಸ್ಯರ ಫೋಟೋ ಬದಲಾವಣೆ

ತಿದ್ದುಪಡಿಗೆ ಯಾವೆಲ್ಲಾ ದಾಖಲೆಗಳು ಬೇಕು?

* ಸದಸ್ಯರ ಆಧಾರ್‌ ಕಾರ್ಡ್ ಕಡ್ಡಾಯ

* ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ

* ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ.

ಪತ್ನಿ ಸೇರ್ಪಡೆಗೆ ಯಾವೆಲ್ಲಾ ದಾಖಲೆಗಳು ಬೇಕು?

* ಆಧಾರ್ ಕಾರ್ಡ್

* ವಿವಾಹ ಪ್ರಮಾಣ ಪತ್ರ

* ಪೋಷಕರ ಪಡಿತರ ಚೀಟಿ ಅಗತ್ಯ

* ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಮಗುವಿನ ಜನನ ಪ್ರಮಾಣಪತ್ರ ಕಡ್ಡಾಯವಾಗಿದೆ.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button