State
ಆಪರೇಷನ್ ಸಿಂಧೂರ್ ಬಳಿಕ ದೇಶದೆಲ್ಲೆಡೆ ಹೈ ಅಲರ್ಟ್ ಘೋಷಣೆ: ಬೆಳಗಾವಿಯ ಮಲಪ್ರಭಾ ಜಲಾಶಯಕ್ಕೆ ಬಿಗಿ ಭದ್ರತೆ

ಬೆಳಗಾವಿ: ಆಪರೇಷನ್ ಸಿಂಧೂರ್ ಬಳಿಕ ದೇಶದೆಲ್ಲೆಡೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರಮುಖವಾಗಿ ಇದೀಗ ದೇಶ ಹಾಗೂ ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ಭದ್ರತೆ ಹೆಚ್ಚಿಸಲಾಗಿದ್ದು, ಬೆಳಗಾವಿಯ ಮಲಪ್ರಭಾ ಜಲಾಶಯಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಈಗಾಗಲೇ ರಾಜ್ಯದ ಹಲವು ಜಲಾಶಯಗಳಿಗೆ ಭದ್ರತೆ ಹೆಚ್ಚಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ಮಲಪ್ರಭಾ ಡ್ಯಾಂಗೆ ತಕ್ಷಣದಿಂದಲೇ ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಸಂಪೂರ್ಣ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಮಲಪ್ರಭಾ ಜಲಾಶಯಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧವಿಧಿಸಲಾಗಿದೆ. ಮಲಪ್ರಭಾ ಜಲಾಶಯದ ಭದ್ರತೆಗೆ ಸ್ಥಳೀಯ ಸವದತ್ತಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಅಪರಿಚಿತ ವ್ಯಕ್ತಿಗಳ ಚಲನವಲನಗಳ ಮೇಲೆ ಹೆಚ್ಚು ನಿಗಾ ವಹಿಸಲಾಗಿದೆ.



