State

ಮಳೆಗಾಲ ವೇಳೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ, ಸಚಿವ ಸಂತೋಷ ಲಾಡ್ ಖಡಕ್ ಎಚ್ಚರಿಕೆ

ಮಳೆಗಾಲ ವೇಳೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ- ಸಚಿವ ಲಾಡ್‌
ಧಾರವಾಡ: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ ನಿರ್ವಹಿಸಬೇಕು. ನಿಮ್ಮ ಇಲಾಖೆ ಕರ್ತವ್ಯಗಳಿಂದ ವಿಮುಖರಾಗಬೇಡಿ. ಯಾವುದೇ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರ್ಲಕ್ಷ್ಯದಿಂದ ಜೀವ ಹಾನಿ ಉಂಟಾದರೆ, ಆಯಾ ಅಧಿಕಾರಿಯನ್ನು ಜವಾಬ್ದಾರಗೊಳಿಸಿವುದರ ಜತೆಗೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
May be an image of 9 people
ಸೋಮುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆಯಿಂದ ಆಗಿರುವ ಹಾನಿ, ಅದಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆಯಲ್ಲಿ ಸುಮಾರು 2 ಸಾವಿರದಷ್ಟು ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಪ್ರತಿಯೊಬ್ಬರಿಗೂ ಐದು ಮೀಟರ್ ರಸ್ತೆಯನ್ನು ಸ್ವಚ್ಛತೆ ಕೊಟ್ಟು, ಪ್ರತಿದಿನ 10 ಕಿ.ಮೀ ರಂತೆ ಸಂಪೂರ್ಣ ನಗರವನ್ನು ಸ್ವಚ್ಛ ಮಾಡಲು ಒಂದು ರೋಡ್ ಮ್ಯಾಪ್ ಸಿದ್ಧ ಮಾಡಿಕೊಳ್ಳಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಸಚಿವರು ಸೂಚನೆ ನೀಡಿದರು. ಜತೆಗೆ ಜನರು ಜಾಗೃತರಾಗಬೇಕು ಇಳಿಜಾರು ಪ್ರದೇಶದಲ್ಲಿ ಅವರು ಮನೆ ಕಟ್ಟುತ್ತಾರೆ,May be an image of 4 people, dais and text
ಅನಧಿಕೃತ ಜಾಗದಲ್ಲಿ ಅವರೇ ನಿವೇಶನವನ್ನು ಕಟ್ಟಿಕೊಳ್ಳುತ್ತಾರೆ, ಅನಧಿಕೃತ ಲೇಜೌಟ್ಗಳನ್ನು ಮಾಡಿಕೊಳ್ಳುತ್ತಾರೆ. ಇದರಿಂದ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಸಾರ್ವಜನಿಕರಿಗೆ ನಾಗರಿಕ ಸಮಸ್ಯೆಗಳನ್ನು ಅರ್ಥೈಸಬೇಕು. ಅದಕ್ಕಾಗಿ ಸಾರ್ವಜನಿಕರಿಗೆ ಈ ಕುರಿತು ಮನವರಿಕೆಯಾಗಬೇಕು ಎಂದರು.
ಧಾರವಾಡ ಜಿಲ್ಲೆಯಲ್ಲಿ ಹಾಗೂ ಎಲ್ಲ ತಾಲೂಕುಗಳು ಸೇರಿ ಅಂದಾಜು ಶೇ 67 ರಷ್ಟು ಮುಂಗಾರು ಬಿತ್ತನೆಯಾಗಿದೆ. ಬಿತ್ತನೆ ಬೀಜ ಹಾನಿ ಪರಿಶೀಲಿಸಿ ಹಾಗೂ ರೈತ ಮುಖಂಡರೊಂದಿಗೆ ಚರ್ಚೆ ಮಾಡಿ, ನಂತರ ಮತ್ತೆ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅವರು ಹೇಳಿದರು.
ಎಲ್ಲ ಗ್ರಾಮ ಪಂಚಾಯತ ಅಧಿಕಾರಿಗಳವರು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಸಮಸ್ಯೆಗಳಿದ್ದರೆ, ಆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ, ಜನರೊಂದಿಗೆ ಉತ್ತಮ ರೀತಿಯಲ್ಲಿ ಪ್ರತಿಕ್ರಿಯಿಸಬೇಕು. ಒಂದು ವೇಳೆ ನಾವು ನೆರೆಹಾವಳಿಗಳ ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿ ಯಾವುದೇ ಅಧಿಕಾರಿಗಳು ಇಲ್ಲದೆ ಇರುವುದು ಕಂಡುಬಂದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಮಳೆಗಾಲ ಮುಗಿಯುವವರೆಗೂ ಯಾವುದೇ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗಬಾರದು. ಜನಸಾಮಾನ್ಯರು ಯಾವುದೇ ಸಮಯದಲ್ಲಿ ಕರೆ ಮಾಡಿದರು ಅಧಿಕಾರಿಗಳು ಅದಕ್ಕೆ ಸರಿಯಾಗಿ ಸ್ಪಂದನೆ ಮಾಡಬೇಕು ಎಂದು ಹೇಳಿದರು.
ಮುಂಬರುವಂತಹ ಪ್ರತಿಯೊಂದು ಕೆ.ಡಿ.ಪಿ ಸಭೆಯಲ್ಲಿ ಎಲ್ಲಾ ಅಧಿಕಾರಿ ವರ್ಗದವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವಂತಹ ಸ್ಥಳಗಳಲ್ಲಿ ಯಾವ ರೀತಿ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸ್ಥಳಗಳನ್ನು ಗುರುತಿಸಬೇಕು. ಮಳೆಗಾಲ ಮುಗಿಯುವವರೆಗೂ ಅಧಿಕಾರಿಗಳು 24X7 ಕೆಲಸವನ್ನು ಮಾಡಬೇಕು ಎಂದು ಸಚಿವರು ತುಳಿಸಿದರು.
ಮಳೆಯಿಂದ ಹಾನಿಗೊಳಗಾದ ರಸ್ತೆಗಳನ್ನು ಕೂಡಲೇ ಯಾವುದೇ ರೀತಿ ಅಡಚಣೆಗಳು ಜನರಿಗೆ ಆಗದ ಹಾಗೆ ತಾತ್ಕಾಲಿಕವಾಗಿ ಆದರೂ ರಸ್ತೆ ಮಾಡಿ ಜನರಿಗೆ ಮಾರ್ಗವನ್ನು ಕಲ್ಪಿಸಬೇಕು ಎಂದು ಲೋಕೋಪಯೋಗಿ ಇಲಾಖೆಯವರಿಗೆ ಸೂಚಿಸಿದರು.
Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button