State

ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಹೊಸ ದಾಖಲೆ ಮೂರು ತಿಂಗಳಲ್ಲಿ 3.81 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ: ಸವದತ್ತಿಯ ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮೀ ಯೋಜನೆಯಿಂದಾಗಿ ಕಾಣಿಕೆ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ.

ದೇಶದ ನಾನಾ ಭಾಗಗಳಿಂದ ಯಲ್ಲಮ್ಮನ ಗುಡ್ಡಕ್ಕೆ ಆಗಮಿಸುವ ಭಕ್ತರು, ದೇವಸ್ಥಾನದ ಹುಂಡಿಯಲ್ಲಿ ಹಣ, ಚಿನ್ನಾಭರಣ ಮತ್ತು ಬೆಳ್ಳಿ ಆಭರಣಗಳನ್ನು ಹಾಕಿ ಭಕ್ತಿ ಸಮರ್ಪಿಸುತ್ತಾರೆ. ೨೦೨೫ರ ಎಪ್ರಿಲ್ ೧ ರಿಂದ ಜೂನ್ ೩೦ರ ಅವಧಿಯಲ್ಲಿ(೩ ತಿಂಗಳು)ಹೀಗೆ ಹಾಕಿದ್ದ ಕಾಣಿಕೆಗಳನ್ನು ಐದು ಸುತ್ತುಗಳಲ್ಲಿ ಎಣಿಕೆ ಮಾಡಲಾಯಿತು.

೨೦೨೩ ರಲ್ಲಿ ಇದೇ ಅವಧಿಯಲ್ಲಿ ರೂ ೧,೬೫,೧೭,೦೫೬ ಕಾಣಿಕೆ, ೨೦೨೪ರಲ್ಲಿ  ಈ ಅವಧಿಯಲ್ಲಿ ರೂ. ೧,೯೬,೫೬,೦೩೫ ಕಾಣಿಕೆ ಸಂಗ್ರಹವಾಗಿತ್ತು.  ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ದುಪ್ಪಟ್ಟು ಕಾಣಿಕೆ ಸಂಗ್ರಹವಾಗಿದ್ದು ಹೊಸ ದಾಖಲೆ ನಿರ್ಮಾಣವಾಗಿದೆ.

ದವಸ್ಥಾನದಲ್ಲಿ ವಿವಿಧ ಹೊಸ ಕ್ರಮಗಳನ್ನು ಅನುಸರಿಸಿದ್ದರಿಂದ ದೇವಸ್ಥಾನದ ಆದಾಯ ಹೆಚ್ಚಳವಾಗಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಭಕ್ತರಿಗೆ ವಿವಿಧ ಮೂಲಸೌಕರ್ಯ ಒದಗಿಸಲಾಗುವುದು. ವಸತಿ, ಶುದ್ದ ಕುಡಿಯುವ ನೀರು, ಸುಲಭ ದರ್ಶನ, ಭಕ್ತರಿಗೆ ನೆರಳಿನ ವೈವಸ್ಥೆ ಅಲ್ಲದೆ, ಸ್ವಚ್ಚತೆಯ ಕಡೆಗೆ ಗಮನ ನೀಡಲಾಗಿದೆ ಎಂದು ಯಲ್ಲಮ್ಮಾ ದೇವಸ್ಥಾನ ಅಭಿವೃದ್ದಿ ಕಾರ್ಯಧರ್ಶಿ ಅಶೋಕ ದುಡಗುಂಟಿ ತಿಳಿಸಿದರು.

ಸವದತ್ತಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ಬೆಳಗಾವಿ ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿ ಬಾಳೇಶ ಅಬ್ಬಾಯಿ, ರಾಜು ಕಗದಾಳ,  ಪ್ರಕಾಶ ಪ್ರಭುನವರ, ಅಲ್ಲಮಪ್ರಭು ಪ್ರಭುನವರ, ಆರ್ ಎಚ್ ಸವದತ್ತಿ, ಸಿ ಎನ್ ಕುಲಕರ್ಣಿ, ಸದಾನಂದ ಶಿಂತ್ರಿ, ಆಯ್ ಸಿ ಕಗದಾಳ,  ಕೆನರಾ ಬ್ಯಾಂಕ್ ಮ್ಯಾನೇಜರ ಚಾಣಾಕ್ಷ ನವಲಕರ, ಮಂಜು ಆಡಕರ, ರಾಮಣ್ಣಾ ಕೊದಾಂನಪೂರ, ಎಮ್ ಎಮ್ ಕಗದಾಳ,  ಪ್ರಭು ಹಂಜಗಿ, ಶಿವಾನಂದ ನೇಸರಗಿ, ಎ ಎಸ್ ಐ, ಬಿ ಆರ್ ಸಣ್ಣಮಾಳಗೆ, ಶ್ರೀಧರ ಗಲಗಲಿ, ಗೋವಿಂದರಾವ್ ಕುಲಕರ್ಣಿ, ಮಲ್ಲಪ್ಪ ದರೂರ, ಮುತ್ತು ಅಮಾತೇನ್ನವರ ಹಾಗೂ ದೇವಸ್ಥಾನದ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button