India

ಪುಲ್ವಾಮಾ ದಾಳಿಗೆ 7 ವರ್ಷ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ

ಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದ್ರೆ ಇದೇ ದಿನ ಸರಿಯಾಗಿ 6 ವರ್ಷಗಳ ಹಿಂದೆ ಭಾರತೀಯ ಸೇನೆ  ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್  ಯೋಧರು ಹುತಾತ್ಮರಾಗಿದ್ದರು. ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು.

ಈಗಲೂ ಪ್ರತಿ ವರ್ಷ ಫೆಬ್ರವರಿ 14, ಭಾರತೀಯರ ಪಾಲಿಗೆ ಮರೆಯಲಾಗದ ದಿನ, ಕರಾಳ ದಿನ ಎಂದೇ ಹೇಳಬಹುದು. ಹೌದು.. 6 ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್‌ಪಿಎಫ್ ಅಧಿಕಾರಿಗಳು ಹುತಾತ್ಮರಾಗಿದ್ದರು. ಈ ಸುದ್ದಿ ಕೇಳಿ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು.

ಜೈಶ್-ಎ-ಮೊಹಮ್ಮದ್  ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವ ಕಳೆದುಕೊಂಡರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬೆಂಗಾವಲು ಪಡೆಯ ಮೇಲೆ ಭೀಕರವಾಗಿ ದಾಳಿ ನಡೆಸಲಾಗಿತ್ತು. ಈ ಕರಾಳ ಘಟನೆಯ ಬಗ್ಗೆ ನೆಟ್ಟಿಗರು #BlackDay ಹೆಸರಿನಲ್ಲಿ ಪೋಸ್ಟ್‌ ಮಾಡಿ ವೀರ ಯೋಧರ ಬಲಿದಾನವನ್ನು ಸ್ಮರಿಸುತ್ತಿದ್ದಾರೆ.

ದಾಳಿಯ ಪ್ರಮುಖ ಅಂಶಗಳು
14 ಫೆಬ್ರವರಿ 2019:
ಜಮ್ಮು ಮತ್ತು ಕಾಶ್ಮೀರದಲ್ಲಿ 40 ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ 2 ಬಸ್‌ಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ  ಜಿಲ್ಲೆಯಲ್ಲಿ ಬಸ್‌ಗಳು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಅರೆಸೇನಾಪಡೆಯ ವಾಹನಗಳ ದೊಡ್ಡ ಗುಂಪಿನ ಭಾಗವಾಗಿತ್ತು. ದಾಳಿಯ ಸ್ವಲ್ಪ ಸಮಯದ ನಂತರ ಜೈಶ್-ಇ-ಮೊಹಮ್ಮದ್ ಸಂಘಟನೆ ವೀಡಿಯೋ ಬಿಡುಗಡೆ ಮಾಡಿತು. ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿಬಾಗ್, ಕಾಕಪೋರಾದಲ್ಲಿ ವಾಸಿಸುತ್ತಿದ್ದ ಸ್ಥಳೀಯ ಕಾಶ್ಮೀರಿ ಜಿಹಾದಿ ಎಂದು ಹೇಳಿಕೊಂಡಿದ್ದನು.

15 ಫೆಬ್ರವರಿ 2019:
ಫೆಬ್ರವರಿ 15, 2019 ರಂದು ಪತ್ರಿಕಾ ಪ್ರಕಟಣೆಯಲ್ಲಿ ವಿದೇಶಾಂಗ ಸಚಿವಾಲಯವು, ಪಾಕಿಸ್ತಾನವು ಭಯೋತ್ಪಾದನೆ ಬೆಂಬಲಿಸುತ್ತಿದೆ ಎಂದು ಆರೋಪಿಸಿತು. ಪಾಕಿಸ್ತಾನಿ ನಿಯಂತ್ರಿತ ಪ್ರದೇಶಗಳಲ್ಲಿ ತನ್ನ ಭಯೋತ್ಪಾದಕ ಮೂಲಸೌಕರ್ಯವನ್ನು ನಿರ್ವಹಿಸಲು ಮತ್ತು ವಿಸ್ತರಿಸಲು, ಭಾರತ ಇತರೆಡೆ ದಾಳಿಗಳನ್ನು ನಡೆಸಲು ಜೈಷ್‌ ನಾಯಕ ಮಸೂದ್ ಅಜರ್‌ಗೆ ಸಂಪೂರ್ಣ ಸ್ವಾತಂತ್ರ‍್ಯವನ್ನು ನೀಡಲಾಗಿದೆ ಎಂದು ವಿದೇಶಾಂಗ ಇಲಾಖೆ ಆರೋಪಿಸಿತು.

ಪುಲ್ವಾಮಾ ದಾಳಿಯಲ್ಲಿ ಪಾಕ್ ಭಾಗವಹಿಸಿದೆ ಎಂಬ ಆರೋಪವನ್ನ ಪಾಕಿಸ್ತಾನ ನಿರಾಕರಿಸಿತು. ಮಸೂದ್ ಅಜರ್ ಭಯೋತ್ಪಾದಕ ಸಂಘಟನೆಗೆ ಸೇರಿದವನಲ್ಲ ಎಂದು ಚೀನಾ ಸಮರ್ಥಿಸಿಕೊಂಡಿತು. ಇದಕ್ಕೆ ಕಾರಣರಾದವರು ಭಾರೀ ಬೆಲೆ ತೆರಬೇಕಾಗುತ್ತದೆ ಮತ್ತು ಭಯೋತ್ಪಾದಕರನ್ನ ಎದುರಿಸಲು ಭದ್ರತಾ ಪಡೆಗಳಿಗೆ ಮುಕ್ತ ನಿಯಂತ್ರಣ ನೀಡಲಾಗುವುದು. ಉಗ್ರರು ಎಲ್ಲೇ ಅಡಗಿದ್ದರೂ ಅವರ ಮನೆಗೆ ನುಗ್ಗಿ ಹೊಡೆದು ಬರುತ್ತೇವೆ ಎಂದು ಅಂದು ಮೋದಿ ಗುಡುಗಿದ್ದರು. ಇಂತಹ ದಾಳಿಗಳನ್ನು ಸಂಘಟಿಸಿ ಭಾರತವನ್ನ ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು. ಪುಲ್ವಾಮಾ ಭಯೋತ್ಪಾದಕ ದಾಳಿಯ ವಿರುದ್ಧ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಜಮ್ಮುವಿನಲ್ಲಿ ಕರ್ಫ್ಯೂ ಜಾರಿಗೊಳಿಸಲಾಯಿತು. ಮಿಲಿಟರಿ ಪಡೆಗಳ ನಿಯೋಜನೆಯಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಯಿತು.

16 ಫೆಬ್ರವರಿ 2019:
ರಾಜಕೀಯ ಪಕ್ಷಗಳು ಭದ್ರತಾ ಪಡೆಗಳನ್ನು ಬೆಂಬಲಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದವು, ಸ್ವಲ್ಪ ಸಮಯದ ನಂತರ ಎಲ್ಲಾ ಪಾಕಿಸ್ತಾನಿ ಸರಕುಗಳ ಮೇಲಿನ ಕಸ್ಟಮ್ಸ್ ಸುಂಕವನ್ನು 200 ಪ್ರತಿಶತಕ್ಕೆ ಹೆಚ್ಚಿಸಲಾಯಿತು. – ಜೆಇಎಂ ಜೊತೆ ಆಪಾದಿತ ಸಂಪರ್ಕ ಹೊಂದಿರುವ ಕನಿಷ್ಠ 7 ಜನರನ್ನು ಪುಲ್ವಾಮದಲ್ಲಿ ಬಂಧಿಸಲಾಯಿತು.

ಈ ದಾಳಿ ಪರಿಣಾಮದಿಂದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟೂ ಹದಗೆಟ್ಟಿತ್ತು. ಭಾರತವು ತನ್ನ ಅತ್ಯಂತ ಆದ್ಯತೆಯ ರಾಷ್ಟ್ರವಾಗಿ ಪಾಕಿಸ್ತಾನದ ಸ್ಥಾನಮಾನ ತೆಗೆದುಹಾಕಿತು. ಭಾರತಕ್ಕೆ ಆಮದು ಮಾಡಿಕೊಳ್ಳುವ ಎಲ್ಲಾ ಪಾಕಿಸ್ತಾನಿ ಸರಕುಗಳ ಮೇಲಿನ ಕಸ್ಟಮ್ಸ್ ಹೆಚ್ಚಿಸಲಾಯಿತು. ಭಾರತ ಸರ್ಕಾರದ ಪ್ರಕಾರ, ಪಾಕಿಸ್ತಾನವನ್ನು ಮನಿ ಲಾಂಡರಿಂಗ್ (ಎಫ್‌ಎಟಿಎಫ್) ಕಪ್ಪುಪಟ್ಟಿಗೆ ಹಣಕಾಸು ಆಕ್ಷನ್ ಟಾಸ್ಕ್ ಫೋರ್ಸ್ ಸೇರಿಸಬೇಕು. ಜಮ್ಮು ಮತ್ತು ಕಾಶ್ಮೀರ ಆಡಳಿತವು ಫೆಬ್ರವರಿ 17 ರಂದು ಪ್ರತ್ಯೇಕತಾವಾದಿ ನಾಯಕರ ಭದ್ರತೆಯನ್ನು ಹಿಂದಕ್ಕೆ ಪಡೆದುಕೊಂಡಿತು.

26 ಫೆಬ್ರವರಿ 2019:
ಭಾರತೀಯ ವಾಯುಪಡೆಯ ಜೆಟ್‌ಗಳು 12 ದಿನಗಳ ನಂತರ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿರುವ ಬಾಲಾಕೋಟ್‌ನ ಜೆಇಎಂ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿತು. 1971ರ ಭಾರತ-ಪಾಕಿಸ್ತಾನ ಯುದ್ಧದ ನಂತರ, ದಾಳಿಯ ವಿಮಾನವು ನಿಯಂತ್ರಣ ರೇಖೆಯನ್ನು ದಾಟಿದ್ದು ಇದೇ ಮೊದಲಾಗಿತ್ತು. ಫೆಬ್ರವರಿ 26 ರಂದು, ಭಾರತೀಯ ವಾಯುಪಡೆಯ 12 ಮಿರಾಜ್-2000 ಜೆಟ್‌ಗಳು, ಗಡಿ ನಿಯಂತ್ರಣ ರೇಖೆಯನ್ನು ದಾಟಿ ಬಾಲಕೋಟ್‌ನಲ್ಲಿದ್ದ ಉಗ್ರಗಾಮಿ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡಿತು. ಇದು ಜೈಶ್-ಇ-ಮೊಹಮ್ಮದ್ ತರಬೇತಿ ಶಿಬಿರದ ಮೇಲೆ ನಡೆಸಿದ ದಾಳಿ ಮತ್ತು ಈ ದಾಳಿಯಲ್ಲಿ ಸುಮಾರು 250 ಉಗ್ರಗಾಮಿಗಳು ಬಲಿಯಾದರು ಎಂದು ವರದಿ ಹೇಳಿತ್ತು.

27 ಫೆಬ್ರವರಿ 2019:
ಪಾಕಿಸ್ತಾನದ ಎಫ್-16 ಯುದ್ಧ ವಿಮಾನಗಳು ಭಾರತದ ವಾಯುನೆಲೆಯನ್ನು ಪ್ರವೇಶಿಸಿದವು. ಈ ಯುದ್ಧವಿಮಾನಗಳು ಭಾರತೀಯ ಮಿಗ್-21 ಬೈಸನ್ ಎರಡು ಯುದ್ಧವಿಮಾನಗಳನ್ನು ನಾಶಪಡಿಸಿದವು. ಇದೇ ವೇಳೆ ಪಾಕಿಸ್ತಾನದ ಎಫ್-16 ವಿಮಾನವನ್ನು ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಲ್ಟಿಹೊಡೆಯುವಂತೆ ಮಾಡಿದ್ದರು. ಈ ವೇಳೆ ಅಭಿನಂದನ್ ಅವರನ್ನ ಪಾಕಿಸ್ತಾನ ಸೆರೆಹಿಡಿಯಿತು.

28 ಫೆಬ್ರವರಿ 2019:
ಬಂಧಿತ ಐಎಎಫ್ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆ ಮಾಡುವುದಾಗಿ ಇಮ್ರಾನ್ ಖಾನ್ ಫೆಬ್ರವರಿ 28 ರಂದು ಘೋಷಿಸಿದರು.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button