Local NewsPolitics

ರಾಹುಲ್ ಜಾರಕಿಹೊಳಿ ರಾಜ್ಯ ಯೂಥ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ!

ಹುಕ್ಕೇರಿ ಕ್ಷೇತ್ರದಿಂದ ರಾಹುಲ್ ಜಾರಕಿಹೊಳಿ ಸ್ಫರ್ಧೆ?

ಬೆಳಗಾವಿ: ಪಕ್ಷ ಜವಾಬ್ದಾರಿ ‌ಸ್ಥಾನ ನೀಡಿದೆ, ಹೀಗಾಗಿ ಪಕ್ಷದ ಶಕ್ತಿ ಇನ್ನಷ್ಟೂ ಹೆಚ್ಚಿಸಲು ಎಲ್ಲಾ ಕಾರ್ಯಕರ್ತರ ವಿಶ್ವಾಸ ತೆಗೆದುಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷದ ಬಲ ವರ್ಧನೆಗೆ ನಿರಂತರ ಶ್ರಮಿಸಲಾಗುವುದು ಎಂದು ರಾಜ್ಯ ಯುವ ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್ ಜಾರಕಿಹೊಳಿ ಅವರು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಬಹುಮತದಿಂದ ಆಯ್ಕೆಯಾಗಿದ್ದೆನೆ.  ಮತದಾರರ ಆಶೀರ್ವಾದದಿಂದ  ಸುಮಾರು 1 ಲಕ್ಷ 80 ಮತಗಳು ಬಂದಿದೆ. ಮತದಾರರು ,  ಯುವಕರ ಬೆಂಬಲವೇ ಪಕ್ಷದಲ್ಲಿ ಕೆಲಸ ಮಾಡಲು ಮತ್ತಷ್ಟೂ ಶಕ್ತಿ ಬಂದಿದೆ‌.  ಪಕ್ಷ ಸಂಘಟನೆ ನಾವೆಲ್ಲರೂ ಹಗಲಿರುಳು ದುಡಿಯೋಣ, ಸರ್ಕಾರದ  ಯೋಜನೆಯನ್ನು ಯುವಕರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಇದು ಯುವಕರ ಪಕ್ಷ ಎಲ್ಲಾ ಒಗ್ಗಟ್ಟಾಗಿ ಪಕ್ಷಕ್ಕೆ ಶಕ್ತಿ ತುಂಬವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಪಕ್ಷಕ್ಕೆ ಯುವಕರ ಅಗತ್ಯವಿದೆ.  ಹೀಗಾಗಿ ಹೆಚ್ಚೆಚ್ಚು ಯುವಕರು  ಕಾಂಗ್ರೆಸ್ ಗೆ ಸೇರ್ಪಡೆಯಾಗಬೇಕು. ತಂದೆಯವರ ಮಾರ್ಗದರ್ಶನದಲ್ಲಿ   ಮುಂದಿನ ದಿನಗಳಲ್ಲಿ  ಪಕ್ಷದ ಸಂಘಟನೆಗಾಗಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ರಾಜ್ಯಾದ್ಯಂತ ಪ್ರವಾಸ ಕೈಗೊಂಡರು ಪಕ್ಷವನ್ನು ಬಲಗೊಳಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸ್ಪರ್ಧೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ:
ಹುಕ್ಕೇರಿ ಕ್ಷೇತ್ರದಿಂದ ಸ್ಪರ್ಧಿಸುವ ತಯಾರಿ ನಡೆಸಿರುವುದು ನಿಜವೇ ಎಂಬ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ  ರಾಹುಲ್‌ ಅವರು,  ಸ್ಪರ್ಧೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಸಚಿವರ ಸೂಚನೆಯಂತೆ ಪಕ್ಷದ ಸಂಘಟನೆಗಾಗಿ  ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಮತದಾರರ ಹಾಗೂ ಜನರ ವಿಶ್ವಾಸಗಳಿಸಬೇಕಿದೆ.  ಸಧ್ಯಕ್ಕೆ ರಾಜಕೀಯಕ್ಕೆ ಕಾಲಿಟ್ಟದ್ದೆನೆ, ಹಿರಿಯ ಮಾರ್ಗದರ್ಶನದಲ್ಲಿ   ಪಕ್ಷ ಸಂಘಟನೆ ಒಂದೇ ನನ್ನ ಗುರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಯುವಕರು “ಕೈ” ಜೋಡಿಸಿದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದಿದೆ.  ಆದರೆ, ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಬೇಕಿದೆ. ಹೀಗಾಗಿ ಯುವ ಆಯ್ಕೆ ಪ್ರಕ್ರಿಯೆ ಇವಾಗ ನಡೆದಿದೆ.  ಮುಂದಿನ ‌ದಿನಗಳ ವಿವಿಧ ರಾಜ್ಯಗಳಲ್ಲಿ ಪಕ್ಷ ಸಂಘಟನೆಗೆ ಹಗಲಿರುಳು ಶ್ರಮಿಸಲಾಗವುದು. ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಲು ಯುವ ಕಾಂಗ್ರೆಸ್ , ಪಕ್ಷದ ಮುಖಂಡರು ಪ್ರತಿ ಬೂತ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಿ ಪಕ್ಷವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ  ಯುವ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ಆಯೋಜಿಸುವ ಕುರಿತು ಚರ್ಚೆ ನಡೆಯುತ್ತಿದಿಯಾ ಎಂಬ  ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ದಿನಗಳ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುವುದು.  ಜಿಲ್ಲೆಯಲ್ಲಿರು  ಅಧ್ಯಕ್ಷ-ಉಪಾಧ್ಯಕ್ಷರ ಸಮ್ಮತಿಯೊಂದಿಗೆ  ಪ್ರಮುಖ ಕ್ಷೇತ್ರ ಸೇರಿದಂತೆ , ಯುವಕರ ಸಂಘಟನೆಯೊಂದಿಗೆ ಸಮಾವೇಶ ಆಯೋಜಿಸುವ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ  ಜಿಲ್ಲಾ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಪ್ರದಾನ ಕಾರ್ಯದರ್ಶಿ ಪ್ರದೀಪ ಎಂ .ಜೆ , ಕೆಪಿಸಿಸಿ ಅಧ್ಯಕ್ಷ ಮಲಗೌಡ ಪಾಟೀಲ್, ಜಿಪಂ ಸದಸ್ಯರಾದ ಮಹಾಂತೇಶ ಮಗದುಮ್ಮ,  ಬೆಳಗಾವಿ ಗ್ರಾಮೀಣ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತೀಕ್‌ ಪಾಟೀಲ್, ಬಸವರಾಜ ಶಿಗ್ಗಾಂವಿ,  ಚಿಕ್ಕೋಡಿ ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷ  ಸಿದ್ದಕಿ ಅಂಕಲಗಿ, ರಾಜಾ ಸಲೀಂ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಇತರರು ಇದ್ದರು.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button