Local News

Belagavi: ಬಸ್ ಕಂಡಕ್ಟರ್‌ ಮೇಲೆ POCSO ಕೇಸ್ ದಾಖಲು, ಕಣ್ಣೀರಿಟ್ಟ ನಿರ್ವಾಹಕ!

ಬೆಳಗಾವಿ: ಫ್ರೀ ಆಗಿ  ಓಡಾಡೋಕೆ ಕರ್ನಾಟಕದ ಬಸ್ (KSRTC Bus) ಬೇಕು, ಆದ್ರೆ ಕಂಡಕ್ಟರ್ ಮಾತ್ರ ಮರಾಠಿಯಲ್ಲೇ  ಮಾತನಾಡಬೇಕಂತೆ! ಮಾತೃಭಾಷೆ ದಿನವೇ ತಮ್ಮ ಮಾತ್ರಭಾಷೆ ಕನ್ನಡದಲ್ಲಿ ಮಾತನಾಡಿದ ಕಂಡಕ್ಟರ್ ಮೇಲೆ ಮರಾಠಿ ಪುಂಡ ಯುವಕರು ಹಲ್ಲೆ ಮಾಡಿದ್ದರು.
ಗಡಿನಾಡು ಬೆಳಗಾವಿಯ ಸುಳೇಬಾವಿ ಗ್ರಾಮದ ಹೊರ ವಲಯದಲ್ಲಿ ಇಂಥದ್ದೊಂದು ಘಟನೆ ನಿನ್ನೆ ನಡೆದಿತ್ತು. ಕರ್ನಾಟಕ ಸಾರಿಗೆ ಬಸ್‌ನಲ್ಲಿ ಬಂದಿದ್ದ ಕಾಲೇಜು ಯುವತಿಗೆ ಕಂಡಕ್ಟರ್ ಒಬ್ಬರು ಆಧಾರ್ ಕಾರ್ಡ್ ಕೇಳಿದ್ದಾರೆ. ಅವರು ಕನ್ನಡದಲ್ಲಿ ಆಧಾರ್ ಕಾರ್ಡ್ ಕೊಡು ಎಂದಿದ್ದಕ್ಕೆ ಆಕೆ ಜೊತೆಯಿದ್ದ ಮರಾಠಿ ಯುವಕರು ಕಿರಿಕ್ ಮಾಡಿದ್ದಾರೆ. ಮರಾಠಿಯಲ್ಲೇ ಮಾತನಾಡುವಂತೆ ಹೇಳಿದ್ದಾರೆ. ಆದರೆ ಮರಾಠಿ ಬಾರದ ಕಂಡಕ್ಟರ್ ಕನ್ನಡದಲ್ಲೇ ಮಾತನಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಮರಾಠಿ ಪುಂಡ ಯುವಕರು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದಾರೆ. ಸದ್ಯ ಹಲ್ಲೆಗೊಳಗಾದ ಕಂಡಕ್ಟರ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಲಾಗಿದೆ.

ಹೌದು, ಆ ಅಪ್ರಾಪ್ತ ಬಾಲಕಿಯಿಂದ ನಿರ್ವಾಹಕನ ಮೇಲೆ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲು ಮಾಡಲಾಗಿದೆ. ಮೇಲಾಧಿಕಾರಿಗಳ ಗಮನಕ್ಕೆ ತರದೇ ಎಫ್ ಐ ಆರ್ ಕೂಡ ದಾಖಲು ಮಾಡಿಕೊಳ್ಳಲಾಗಿದೆ. ಇದರಿಂದಾಗಿ ಬಸ್ ನಿರ್ವಾಹಕ ಕಣ್ಣೀರಿಟ್ಟಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧನ ಮಾಡಿದ್ದಕ್ಕೆ, ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆಯ ಠಾಕ್ರೆ ಬಣದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕರವೇ ಕಾರ್ಯಕರ್ತರು ಹಾಗೂ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಅನೆ ನಡೆಸಿದ್ದಾರೆ.

ಕರ್ನಾಟಕದ ಸಾರಿಗೆ ಬಸ್ ಗೆ ಭಗವಾ ಧ್ವಜ ಕಟ್ಟಿ ಉದ್ದಟತನ ಮರೆದಿದ್ದಾರೆ. ಕೊಲ್ಲಾಪುರದಿಂದ ರಾಜ್ಯಕ್ಕೆ ಬರುತ್ತಿದ್ದ KSRTC ಬಸ್ ಗೆ ಧ್ವಜ ಕಟ್ಟಿ ಪುಂಡಾಟ ಮೆರೆದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಿಪ್ಪಾಣಿ ಮಾರ್ಗವಾಗಿ ಕೊಲ್ಲಾಪುರಕ್ಕೆ ತೆರಳುವ KSRTC ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಹಲ್ಲೆ ನಡೆಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಗ್ರಾಮದವರು ಎಂದು ತಿಳಿದುಬಂದಿದೆ. ನಿರ್ವಾಹಕನ ಮೇಲಿನ ಹಲ್ಲೆಗೆ ಕನ್ನಡ ಪರ ಸಂಘಟನೆಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದ್ದು, ಅವರನ್ನು ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಿದ್ದಾರೆ.

ಹಲ್ಲೆಗೆ ಕಾರಣವೇನು?

ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದ ಹೊರವಲಯದಲ್ಲಿ ಬಸ್ ನಿರ್ವಾಹಕರೊಬ್ಬರ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿತ್ತು. ಯುವತಿಯೊಬ್ಬರಿಗೆ ಆಧಾರ್ ಕಾರ್ಡ್ ಕೇಳಿದ್ದಕ್ಕೆ ಸಿಟ್ಟಿಗೆದ್ದ ಯುವಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಬಸ್ ನಿರ್ವಾಹಕರು ಯುವತಿಗೆ ಕನ್ನಡದಲ್ಲಿ ಆಧಾರ್ ಕಾರ್ಡ್ ತೋರಿಸುವಂತೆ ಕೇಳಿದ್ದಾರೆ. ಆದರೆ ಯುವತಿ ಜೊತೆಗಿದ್ದ ಯುವಕನೋರ್ವ ನಿರ್ವಾಹಕರ ಜೊತೆಗೆ ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ಯುವಕರು ಹಾಗೂ ಬಸ್ ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆದಿದೆ.

ಸ್ನೇಹಿತರನ್ನು ಕರೆಸಿ ನಿರ್ವಾಹಕನ ಮೇಲೆ ಹಲ್ಲೆ

ಮಾತಿಗೆ ಮಾತು ಬೆಳೆದಂತೆ, ಯುವಕ ತನ್ನ ಸ್ನೇಹಿತರನ್ನು ಸ್ಥಳಕ್ಕೆ ಕರೆಸಿ ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ್ದಾನೆ. ಯುವತಿ ಜೊತೆಗೆ ಮರಾಠಿಯಲ್ಲಿ ಮಾತನಾಡುವಂತೆ ನಿರ್ವಾಹಕನ ಜೊತೆಗೆ ಯುವಕ ಕಿರಿಕ್ ಮಾಡಿದ್ದಾನೆ. ನನಗೆ ಮರಾಠಿ ಬರೋದಿಲ್ಲ, ಕನ್ನಡದಲ್ಲೇ ಮಾತನಾಡ್ತೀನಿ ಎಂದಿದ್ದಕ್ಕೆ ಯುವಕ ಬಸ್ ನಿರ್ವಾಹಕ ಮಹಾದೇವಪ್ಪ ಜೊತೆ ಜಗಳ ತೆಗೆದಿದ್ದಾನೆ. ಮಾತಿಗೆ ಮಾತು ಬೆಳೆದು ಸ್ನೇಹಿತರನ್ನು ಕರೆಸಿ ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮರಾಠಿ ಪುಂಡ ಯುವಕನ ದೌರ್ಜನ್ಯದಿಂದ ಬಸ್ ಕಂಡಕ್ಟರ್ ಮಹಾದೇವಪ್ಪ ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದ ಬಸ್ ನಿರ್ವಾಹಕ ಬಿಮ್ಸ್ ‌ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಘಟನೆ ಸಂಬಂಧ ಮಾರಿಹಾಳ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿತ್ತು.

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Karmik Dhwani

Tousif M Mulla National President Public Rights Cell international Humanity Rights & Media Organization KARMIKDHWANI INDIAN NEWS VOICE OF LABOUR Founder President And Chief Editor Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation Chief Editor For Any Kind Of Advertisment Or News Do Contact On This Number: 9686981286

Related Articles

Back to top button